ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣ ಮಾಡುತ್ತಾ ಕಾಂಗ್ರೆಸ್ ಸರ್ಕಾರ?

ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣ ಮಾಡುತ್ತಾ ಕಾಂಗ್ರೆಸ್ ಸರ್ಕಾರ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲ ಮೂಡಿಸಿರುವ ಡಿಕೆ ಶಿವಕುಮಾರ್ ಅವರ ಮಾತು ಎಲ್ಲೆಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಹೌದು ರಾಜ್ಯದ ಉಪಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ಅವರು ವಿಜಯದಶಮಿಯ ದಿನದಂದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಈಗಾಗಲೇ ರಾಜಕೀಯದಲ್ಲಿ ಭರ್ಜರಿಯಾಗಿ ಚರ್ಚೆಯಾಗುತ್ತಿದ್ದು, ಇನ್ನು ಬೆಂಗಳೂರು ನಗರ ಜನತೆಗೆ ಡಿಸಿಎಂ ಇನ್ನೊಂದು ಶಾಪಿಂಗ್ ಸುದ್ದಿಯನ್ನು ನೀಡಿದ್ದಾರೆ.

ಹೌದು, ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ, ಬೆಂಗಳೂರು ನಿವಾಸಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ.’ ಎಂದು ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆ ನಿರ್ಮಾಣದ ಕುರಿತು ಮತ್ತಷ್ಟು ಮಾಹಿತಿ ನೀಡಿದ್ದಾರೆ.

ಮತ್ತೊಂದು ‘ಬೆಂಗಳೂರು’ ನಿರ್ಮಾಣ? ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ತಿಳಿಸಿರುವಂತೆ, ‘ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ & ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು.’ ಎಂದು ಹೇಳಿದ್ದಾರೆ.

ಬೆಂ.ಗ್ರಾಮಾಂತರ & ರಾಮನಗರ ಜಿಲ್ಲೆ! ಹಾಗೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿರ್ಮಾಣದ ಬಗ್ಗೆ ತಿಳಿಸಿರುವ ಡಿಸಿಎಂ, ‘ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲ್ಲೂಕು ಸೇರ್ಪಡೆಯಾಯಿತು.’ ಎಂದು ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಒಟ್ನಲ್ಲಿ ಈ ಮೂಲಕ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಜತೆ ಮತ್ತೊಂದು ಜಿಲ್ಲೆ ಸೇರ್ಪಡೆಯಾಗುವ ನಿರೀಕ್ಷೆ ಮೂಡಿದೆ.

 

Related