ಕಾಂಗ್ರೆಸ್ ಸರ್ಕಾರಕ್ಕೆ ರಾಮ ಮಂದಿರ ಕಟ್ಟಲು ಆಗುವುದಿಲ್ಲ: ಸಿ.ಪಿ.ಯೋಗೇಶ್ವರ್

ಕಾಂಗ್ರೆಸ್ ಸರ್ಕಾರಕ್ಕೆ ರಾಮ ಮಂದಿರ ಕಟ್ಟಲು ಆಗುವುದಿಲ್ಲ: ಸಿ.ಪಿ.ಯೋಗೇಶ್ವರ್

ರಾಮನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಆಗುವುದಿಲ್ಲವೆಂದು ಸಿಪಿ ಯೋಗೇಶ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆನೆ ನಾವು ರಾಮನಗರದಲ್ಲಿ ಅಯೋಧ್ಯೆಯಲ್ಲಿರುವ ರಾಮಮಂದಿರದ ರೀತಿಯ ರಾಮನಗರದಲ್ಲೂ ಕೂಡ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ

ಕಾಂಗ್ರೆಸ್ ನಾಯಕರು ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳುತ್ತಿರುವುದು ಚುನಾವಣಾ ಗಿಮಿಕ್ ಎಂಬುದು ಎಲ್ಲರಿಗೂ ಗೊತ್ತಿದೆ. ರಾಮಮಂದಿರವನ್ನು ಕಾಂಗ್ರೆಸ್‌ನವರಲ್ಲ, ಬಿಜೆಪಿಯವರು ಕಟ್ಟುವ ತೀರ್ಮಾನ ಮಾಡೋಣ ಎಂದರು.

ಶ್ರೀರಾಮ ಮಂದಿರ ಕಟ್ಟ ಬಾರದೆಂದು ಸುಧೀರ್ಘವಾದ ಕಾನೂನು ಹೋರಾಟ ಮಾಡಿದವರು, ಮಂದಿರದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸದವರು ಹಾಗೂ ನಾಡಿನ ನೆಲ, ಜಲ, ಸಂಸ್ಕೃತಿಯ ಬೇರು ಕೀಳಲು ಪ್ರಯತ್ನಿಸಿದ ಕಾಂಗ್ರೆಸ್ ನಾಯಕರು ರಾಮಮಂದಿರ ಕಟ್ಟುವ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದ. ಇದು ಚುನಾವಣಾ ಗಿಮಿಕ್ ಅಂತ ಎಲ್ಲರಿಗೂ ಗೊತ್ತಿದೆ ಎಂದು ಟೀಕಿಸಿದರು.

 

Related