ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆ ಪ್ರಾರಂಭದಲ್ಲೇ ನೀರಿನ ಅಭಾವ ಪ್ರಾರಂಭವಾಗಿದ್ದು, ಬೆಂಗಳೂರು ನಗರವಾಸಿಗಳು ನೀರಿಲ್ಲದೆ ಪರದಾಡುವಂಥ ಪರಿಸ್ಥಿತಿ ಬಂದೊದಗಿದೆ. ನೀರಿನ ಅಭಾವ ಉಂಟಾಗಲು ಕಾಂಗ್ರೆಸ್ನವರೇ ಕಾರಣ ಎಂದು ಆರ್ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಾಡಿದ ಎಡವಟ್ಟಿನಿಂದ ಈಗ ರಾಜ್ಯದ ಜನತೆಗೆ ನೀರಿನ ಅಭಾವ ಉಂಟಾಗಿದೆ ಎಂದು ಹೇಳಿದರು.
ಸಿಎಂ ಮತ್ತು ಡಿಸಿಎಂ ಜೋಡಿಯಿಂದ ನೀರಿನ ಸಮಸ್ಯೆ ಆಗಿದೆ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಒಂದೇ. ಕಾಂಗ್ರೆಸ್ನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ. ಸರ್ಕಾರದ ಬಳಿ ಬೋರ್ ವೆಲ್ ಕೊರಿಸುವುದಕ್ಕೂ ಹಣವಿಲ್ಲ. ನಿಮ್ಮ 2000 ರೂಪಾಯಿಯಿಂದ ಏನು ಆಗುತ್ತದೆ ಎಂದು ಗ್ಯಾರಂಟಿ ಯೋಜನೆಯನ್ನು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ವಿದೇಶ ಚಾನಲ್ನಲ್ಲಿ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ. ನೀರಿನ ಸಮಸ್ಯೆ ಇದೆ, ಅಲ್ಲಿ ಯಾರು ಹೋಗಬೇಡಿ ಅಂತಿದ್ದಾರೆ ಎಂದರು.