ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ: ಆರ್ ಅಶೋಕ

ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ: ಆರ್ ಅಶೋಕ

ಧಾರವಾಡ: ರಾಜ್ಯ ಸರ್ಕಾರದ ವಿರುದ್ಧ ಇಂದು ರಾಜ್ಯದಾದ್ಯಂತ ಬಿಜೆಪಿ ನಾಯಕರುಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಅವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆಯನ್ನು ಕೈಗೊಂಡು ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇವೆ. ಆದರೆ ಎಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಸಿದ್ದರಾಮಯ್ಯ ಅವರು ತಲೆ ಹಾಕಿರೋದು ಯಾಕೆ ಎಂದು ಈ ಸಂದರ್ಭದಲ್ಲಿ ಪ್ರಶ್ನಿಸಿದರು. ಹುಬ್ಬಳ್ಳಿಯ ಶಹರ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಅಶೋಕ, ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ‌ ಕೇಸ್ ಹಾಕುತ್ತಿದ್ದಾರೆ. ಕೂಡಲೇ ಜೈಲಿನಿಂದ ಶ್ರೀಕಾಂತ ಪೂಜಾರಿ ಬಿಡುಗಡೆ ಮಾಡಬೇಕು. ನನ್ನ ಮೇಲೂ ಕೇಸ್ ಇದೆ ಬಂಧಿಸಿ ನೋಡೋಣ ಎಂದು ಸರ್ಕಾರಕ್ಕೆ ಸವಾಲೆಸೆದರು.

 

Related