ಕಾಂಗ್ರೆಸ್‌ ಪಕ್ಷ ಪರಿವಾರಧಾರಿತ ಪಕ್ಷ: ನಳೀನ್‌ ಕುಮಾರ್‌ ಕಟೀಲ್‌

ಕಾಂಗ್ರೆಸ್‌ ಪಕ್ಷ ಪರಿವಾರಧಾರಿತ ಪಕ್ಷ: ನಳೀನ್‌ ಕುಮಾರ್‌ ಕಟೀಲ್‌

ಆನೇಕಲ್ : ತಾಲ್ಲೂಕಿನ ಜಿಗಣಿ ಸಮೀಪದ ಪ್ರಶಾಂತಿ ಕುಟೀರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಾಜ್ಯ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಉದ್ಘಾಟಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಮಾತನಾಡಿ ಬಿಜೆಪಿ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಪಕ್ಷವಾಗಿದೆ. ಪ್ರಶಿಕ್ಷಣ ವರ್ಗದ ಮೂಲಕ ಪದಾಧಿಕಾರಿಗಳಲ್ಲಿ ಜನರ ಬಳಿಗೆ ಪಕ್ಷವನ್ನು ಕೊಂಡೊಯ್ಯಲು ಕೈಗೊಳ್ಳಬೇಕಾದ ಮಾರ್ಗಸೂಚಿ ಮತ್ತು ಕಾರ್ಯಕ್ರಮಗಳ ಬಗ್ಗೆ ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತಿದೆ.

ಭಾರತೀಯ ಜನತಾ ಪಕ್ಷವು ರಾಷ್ಟ್ರೀಯ ಚಿಂತನೆವುಳ್ಳ ಪಕ್ಷವಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೊಂದಿರುವ ಮತ್ತು ಸಾಮಾನ್ಯ ಕಾರ್ಯಕರ್ತರು ಉನ್ನತ ಸ್ಥಾನಕ್ಕೇರುವ ಪಕ್ಷವಾಗಿದೆ. ಆದರೆ ಕಾಂಗ್ರೆಸ್‌ ಪಕ್ಷ ಪರಿವಾರಧಾರಿತ ಪಕ್ಷವಾಗಿದೆ ಎಂದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ಸಂದೀಪ್‌ ಕುಮಾರ್‌ ಮಾತನಾಡಿ ಮೂರು ದಿನಗಳ ತರಬೇತಿ ಅವಧಿಯಲ್ಲಿ ಪದಾಧಿಕಾರಿಗಳು ಹೊಸ ವಿಚಾರಧಾರೆ, ಹುಮ್ಮಸ್ಸಿನಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಂಕಲ್ಪ ಮಾಡಬೇಕು. ವಿಚಾರಧಾರೆಗಳನ್ನು ಬೂತ್ ಮಟ್ಟದಿಂದಲೂ ಜನರಿಗೆ ತಲುಪಿಸಲು ಯುವ ಮೋರ್ಚಾ ಪದಾಧಿಕಾರಿಗಳು ಕಾರ್ಯಕ್ರಮಗಳ ಮೂಲಕ ಸಂಘಟಿಸಬೇಕು ಎಂದರು.

ಈ ಸಂರ್ಭದಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ರೆಡ್ಡಿ, ವಿಧಾನ ಪರಿಷತ್‌ ಸದಸ್ಯ ರವಿಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ರಾಜಶೇಖರರೆಡ್ಡಿ ಇದ್ದರು.

Related