ಕೋಲಾರ: ಲೋಕಸಭಾ ಚುನಾವಣೆಗೆ ಎಲ್ಲಾ ಅಭ್ಯರ್ಥಿಗಳು ಬರದಿಂದ ಸಿದ್ಧತೆಯನ್ನು ಮಾಡಿಕೊಳ್ಳುವುದರ ಜೊತೆಗೆ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ವಿಪರೀತ ಬಿಸಿಲಿನ ಜೊತೆಗೆ ಲೋಕಸಭಾ ಚುನಾವಣೆಯ ಧಗೆ ಹೆಚ್ಚಾಗುತ್ತಿದೆ.
ಇನ್ನು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಲೋಕಸಭಾ ಚುನಾವಣೆ ಪ್ರಯುಕ್ತ ಮೂರು ಮೂರು ಸಾರಿ ನಾಮಪತ್ರ ಸಲ್ಲಿಸುತ್ತಿದ್ದಾರೆ ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮೂರು ನಾಮ ಬೀಳುವುದು ಪಕ್ಕ ಎಂದು ಸಂಸದ ಎಸ್ ಮುನಿಸ್ವಾಮಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕಾರಣಕ್ಕೆ ಬರಲು ಜೆಡಿಎಸ್ ಪಕ್ಷವೇ ಕಾರಣ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷ ಇರದಿದ್ದರೆ ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಇಲ್ಲಿಯವರೆಗೂ ಅಭಿವೃದ್ಧಿಯಾಗಲು ಸಾಧ್ಯವೇ ಇರಲಿಲ್ಲವೆಂದು ಸಿದ್ದರಾಮಯ್ಯ ಅವರಿಗೆ ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ದ ನಡೆಯುತ್ತಿದೆ. ಸತ್ಯ ಮೇವ ಜಯತೆ ಎಂಬಂತೆ ಧರ್ಮ ಮೇವಾ ಜಯತೆ ಅಗಲಿದೆ ನಮ್ಮದು ಸತ್ಯ-ಧರ್ಮ ರಾಜಕಾರಣವಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಡಳಿತವು ಎತ್ತು ಏರಿಕೆ ಎಳೆದರೆ ಕೋಣ ನೀರಿಗೆ ಎಳೆದ ಗಾದೆಯಂತೆ ಆಗಿದೆ. ಕಾಂಗ್ರೆಸ್ ಪಕ್ಷ ಮುಖಂಡರ ಇಂದು ಪಾಕಿಸ್ತಾನದ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಪಕ್ಷವು ಒಂದು ಸೀಟ್ ಬರುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ ಎಂದು ಭವಿಷ್ಯ ನುಡಿದರು.