ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್ ಖಂಡನೆ..!

ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್ ಖಂಡನೆ..!

ಹೈಕೋರ್ಟ್ ಆದೇಶದ ಹಿನ್ನೆಲೆ ಕೇವಲ ಫ್ರೀಡಂ ಪಾರ್ಕ್​ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಕಾರ್ಯಕರ್ತರು ಗಿರಿನಗರ ಸರ್ಕಲ್​ನಿಂದ ತೇಜಸ್ವಿ ಸೂರ್ಯ ನಿವಾಸಕ್ಕೆ ಮೆರವಣಿಗೆ ನಡೆಸಲು ಮುಂದಾಗಿದ್ದರು.

ಬೆಂಗಳೂರು: ಹತ್ಯೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಇದ್ದಿದ್ರೆ ಕಲ್ಲು ಹೊಡೆಯಬಹುದಾಗಿತ್ತು ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಗಿರಿ ನಗರದಲ್ಲಿರುವ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಲ್ಲುಗಳನ್ನು ಮತ್ತು ಹೂಗಳನ್ನು ನೀಡುವ ಮೂಲಕ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಇನ್ನು ಸಂಸದರ ಮನೆಗೆ ಬಂದು ಹೂ ನೀಡಲು ಮುಂದಾಗಿದ್ದ ಕಾರ್ಯಕರ್ತೆಯನ್ನು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ.

Related