ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ;ಶಾಸಕ,

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ;ಶಾಸಕ,

ಗೌರಿಬಿದನೂರು: ದೇಶದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಜನವಿರೋಧಿ ಸರ್ಕಾರಗಳೆಂದು ಜನರಿಗೆ ಮನವರಿಕೆಯಾಗಿದೆ. ಎಲ್ಲ ಗೊಂದಲಮಯವಾದ ಅಡಳಿತದಿಂದ ಹಾಗೂ ದಿಕ್ಕು ದೆಸೆ ಇಲ್ಲದ ಆರ್ಥಿಕ ನೀತಿಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿ ಅಗಿದೆ. ಈ ಬಗ್ಗೆ ಜನಾಂಧೋಲನ ಕಾರ್ಯಕ್ರಮಗಳ ಮೂಲಕ ಜಾಗೃತಿ ಮಾಡಬೇಕಿದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
ನಗರದ ನದಿ ದಡ ಶ್ರೀ ಅಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ಯುವ ಕಾಂಗ್ರೆಸ್ ಘಟಕದ ವತಿಂದ ಅಯೋಜಿಸಿದ್ದ ಕಾರ್ಯಕರ್ತರ ಸಭೆ ಮತ್ತು ಸೇರ್ಪಡೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾತನಾಡಿ ಈ ಹಿಂದೆ ಅಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳನ್ನು ನಮ್ಮ ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸಿಬೇಕು. ಜೊತೆಗೆ ತಳ ಮಟ್ಟದ ಕಾರ್ಯಕರ್ತರು ಪಕ್ಷದ ಬಲವರ್ಧನೆಗಾಗಿ ದುಡಿಯಬೇಕು, ಬಿಜೆಪಿ ತಂದಿರುವ ರೈತ ವಿರೋಧಿ ಕಾಯ್ದೆಗಳ ಬಗ್ಗೆ ಜಾಗೃತಿ ಮೂಲಕ ತಿಳಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಸಿದ್ದಾರಾಮಯ್ಯ ಅವರ ನೇತೃತ್ವದಲ್ಲಿ ಪಕ್ಷವನ್ನು ರಾಜ್ಯದಲ್ಲಿ ಸಂಘಟನೆಗೆ ಮುಂದಾಗುತ್ತವೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

Related