ಕಾಂಗ್ರೆಸ್ ಧೂಳಿಪಟವಾಗಲಿದೆ..!

ಕಾಂಗ್ರೆಸ್ ಧೂಳಿಪಟವಾಗಲಿದೆ..!

ಬೆಂಗಳೂರು: ಇಂದು ಕರ್ನಾಟಕ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದು ಕೇವಲ ಮತದಾನವಲ್ಲ. ಇದು ದೇಶ ಮತ್ತು ರಾಜ್ಯದ ಹಬ್ಬ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ರೆಡ್ಡಿ ಅವರು ಹೇಳಿದ್ದಾರೆ.

ಎಚ್ಎಸ್ಆರ್ ಬಡಾವಣೆಯಲ್ಲಿ ಮತ ಚಲಾಯಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತ ಬದಲಾವಣೆಗಳತ್ತ ದಾಪುಗಾಲಿನಿಂದ ಸಾಗುತ್ತಿದೆ. ಈ ಬದಲಾವಣೆಗಳಲ್ಲಿ ನಿಮ್ಮದು ಒಂದು ಭಾಗವಿರಲಿ, ದೇಶದ ಅಭಿವೃದ್ಧಿಗೆ ಮತ್ತು ಸರ್ವತೋಮುಖಿ ಅಭಿವೃದ್ಧಿ ಮಾಡುತ್ತಿರುವ ನರೇಂದ್ರ ಮೋದಿಯವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಜನ ಈಗಾಗಲೇ ಮೋದಿ ಪರವಾಗಿ ಮತ್ತಷ್ಟು ಒಲವು ತೋರಿಸುತ್ತಿರುವುದರಿಂದ ಈ ಬಾರಿ ಮತ್ತೆ ನರೇಂದ್ರ ಮೋದಿಯವರೇ ಅಧಿಕಾರಕ್ಕೆ ಬರುತ್ತಾರೆ ಎಂಬ ವಿಶ್ವಾಸವಿದೆ. ಜನರು ಸ್ವಯಂ ಪ್ರೇರಿತವಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ಹೆಚ್ಚು ಬಿಸಿಲಿದ್ದರೂ ಕೂಡ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಇನ್ನು ನಮ್ಮ ವಾರ್ಡ್ಗಳಲ್ಲಿ ಹೆಚ್ಚಾಗಿ ಬಿಜೆಪಿಗೆ ಒಲವು ತೋರಿಸುತ್ತಿದ್ದಾರೆ. ಯಾಕೆಂದ್ರೆ ನಮ್ಮ ವಾರ್ಡ್ಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಹಾಗಾಗಿ ಶಾಸಕ ಎಂ ಸತೀಶ್ ರೆಡ್ಡಿ ಅವರ ಅಭಿವೃದ್ಧಿ ನೋಡಿ ಮತ್ತು ತೇಜಸ್ವಿ ಸೂರ್ಯ ಅವರ ಅಭಿವೃದ್ಧಿ ನೋಡಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕೆಂದು ಜನರು ಬಹಳ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದರು.

Related