ದರೋಡೆಗೆ ಸಹಕಾರ ನೀಡಿದ ಕಾನ್ಸ್ಟೇಬಲ್

ದರೋಡೆಗೆ ಸಹಕಾರ ನೀಡಿದ ಕಾನ್ಸ್ಟೇಬಲ್

ಬೆಂಗಳೂರು : ಪೊಲೀಸರ ಸೋಗಿನಲ್ಲಿ ದಾಳಿ ನಡೆಸಿ ಕೂಲಿ ಕಾರ್ಮಿಕರಿಂದ ದರೋಡೆ ಮಾಡಿದ್ದ ಆರೋಪಿಗಳ ಜತೆ ಶಾಮೀಲಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪೂರ್ವ ವಿಭಾಗದ ಡಿಸಿಡಿ ಡಾ. ಎಸ್.ಡಿ ಶರಣಪ್ಪ ಅಮಾನತು ಮಾಡಿ ಆದೇಶ ಮಾಡಿದ್ದಾರೆ.

ಶಿವಾಜಿನಗರ ಪೊಲೀಸ್ ಠಾಣೆಯ ಟೇಬಲ್ ಸಯ್ಯದ್ ಸಮೀವುಲ್ಲಾ ಅಮಾನತು ಆದ ಪೊಲೀಸ್ ಕಾನ್ಸ್ಟೇಬಲ್. ಈತನನ್ನು ವರ್ತೂರು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ಹಣ ಕಳೆದುಕೊಂಡು ಹಲ್ಲೆಗೆ ಒಳಗಾಗಿದ್ದ ಕೂಲಿ ಕಾರ್ಮಿಕರು ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ವರ್ತೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಶಿವಾಜಿನಗರ ಪೊಲೀಸ್ ಠಾಣೆಯ ಮುಖ್ಯ ಪೇದೆ ಟೇಬಲ್ ಸಯ್ಯದ ಸಮೀವುಲ್ಲಾ ಸೂಚನೆ ಮೇರೆಗೆ ದರೋಡೆ ಮಾಡಿ ಹಲ್ಲೆ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಪೊಲೀಸ್ ಕಾನ್ಸ್ಟೇಬಲ್ ಆರೋಪಿಗಳಿಗೆ ಸಹಕರಿಸಿ ದರೋಡೆ ಮಾಡಿದ ಆರೋಪ ಕುರಿತು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಿ. ದೇವರಾಜು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಅವರಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಇಂದು ಸಯ್ಯದ್ ಸಮೀವುಲ್ಲ ಆವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಅಮಾನತಿಗೆ ಒಳಗಾದ ಪೊಲೀಸ್ ಕಾನ್ಸ್ಟೇಬಲ್ ನನ್ನು ವಿಚಾರಣೆಗೆ ಒಳಪಡಿಸುವುದಾಗಿ ಪೊಲೀಸರು ತಿಳಿಸಿದ್ದರು.

Related