ಕೋವಿಡ್-19 ಸೊಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಕೋವಿಡ್-19 ಸೊಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಕಾರವಾರ: ಇಲ್ಲಿನ ನೌಕಾಪಡೆಯ ಐಎನ್‍ಎಚ್‍ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳ ಮೂಲದ ಕೊನೆಯ ಕೊವಿಡ್-19 ಸೊಂಕಿತನೂ ಗುಣಮುಖನಾಗಿ ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾನೆ. ಇದರಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸೊಂಕು ದೃಢಪಟ್ಟ ಎಲ್ಲಾ 11 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ, ಜಿಲ್ಲೆಯಲ್ಲಿ ಕೊವಿಡ್-19 ಸೋಂಕು ಕಂಡು ಬಂದಿದ್ದ 11 ರಲ್ಲಿ 10 ಜನ ಈಗಾಗಲೇ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇದೀಗ ನೌಕಾಪಡೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊನೆಯ ಹನ್ನೊಂದನೇಯ ಸೊಂಕಿತನೂ ಗುಣಮುಖನಾಗಿ ಗುರುವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಆದರೆ ಅವನನ್ನು ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳದಲ್ಲಿಯೇ ಕ್ವಾರಂಟೈನ್‍ನಲ್ಲಿರಿಸಲಾಗುವುದು ಎಂದರು.

ಒಟ್ಟಾರೆ ಜಿಲ್ಲೆಯ ಹನ್ನೊಂದನೇಯ ಸೊಂಕಿತನೂ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಜಿಲ್ಲೆಯ ಕೊವಿಡ್ ಸೊಂಕಿತರ ಸಂಖ್ಯೆ ಶೂನ್ಯಕ್ಕೆತಲುಪಿದ್ದು, ಜಿಲ್ಲೆಯ ಜನತೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Related