ವಿಜಯಪುರ : ರಾಜ್ಯದಲ್ಲಿ 2 ಅಲೆ ಅಟ್ಟಹಾಸದ ಮಧ್ಯೆಯೂ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಕ್ಕಳಮೇಲಿ ಗ್ರಾಮದ ಸಿದ್ದಲಿಂಗೇಶ್ವರ ಜತ್ರೋತ್ಸವ ಶನಿವಾರ ಅದ್ಧೂರಿಯಾಗಿ ನಡೆದಿದೆ.
ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸರ್ಕಾರ ಮಾಸ್ಕ್, ಸಾಮಾಜಿಕ ಅಂತರ ಯಾವುದೇ ನಿಯಮ ಪಾಲಿಸಿಲ್ಲ. ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಕೆಸ್ಗಳು ವರದಿಯಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.
ಜಾತ್ರೆಯಲ್ಲಿ ಎಷ್ಟು ಜನ ಭಾಗವಹಿಸಿದ್ದಾರೆ, ತಾಪಂ ಮುಖ್ಯಾಧಿಕಾರಿಗೆ ಗ್ರಾಮಕ್ಕೆ ಹೋಗಲು ತಿಳಿಸಿದ್ದು ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಜರಗಿಸಲು ಗ್ರಾಮಗಳಲ್ಲಿ ಜಾತ್ರೆಗಳು, ಮದುವೆಗಳು, ಸಮಾರಂಭಗಳು ಇವೆ. ಮಾಹಿತಿ ಪಡೆಯಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಸಿಂದಗಿ ತಹಶೀಲ್ದಾರ್ ಸಂಜುಕುಮಾರ ದಾಸರ ತಿಳಿಸಿದ್ದಾರೆ.