ಬೆಂಗಳೂರು : ನಾಳೆಯಿಂದ ಬೆಂಗಳೂರಿನ ಯಲಹಂಕದ ಏರ್ ಫೋರ್ಸ್ನಲ್ಲಿ ಏರ್ ಶೋ ನಡೆಯಲಿದ್ದು, ಏರ್ ಶೋ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ.
ನಾಳೆಯಿಂದ ಫೆ. 5ರವರೆಗೆ ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವವನ್ನು ನೋಡಬಹುದಾಗಿದೆ. ಕೊರೊನಾ ಭೀತಿಯ ನಡುವೆಯೂ ಏರ್ ಶೋ ನಡೆಯುತ್ತಿದ್ದು, ಜನ ಸಂದಣಿ ತಪ್ಪಿಸಲು ಆಸಕ್ತರಿಗೆ ಆಪ್ ಮೂಲಕ ಉಚಿತ ಏರ್ ಶೋ ವೀಕ್ಷಣೆಗೆ ಅವಕಾಶ ನೀಡಲಾಗಿದೆ.