ಬೆಂಗಳೂರು: ಕಾಶ್ಮೀರದಲ್ಲಿ ದಾಳಿ ಮಾಡಿದ ಪಾಕಿಸ್ತಾನದ ಉಗ್ರರನ್ನು ಹೆಡೆಮುರಿ ಕಟ್ಟಲು ಆಪರೇಷನ್ ಸಿಂದೂರ್ ಮೂಲಕ ಕಾರ್ಯಚರಣೆಗೆ ಇಳಿದಿರುವ ಭಾರತೀಯ ಸೈನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ದೇಶದಲ್ಲಿರುವ ಜನತೆ ಪ್ರಾರ್ಥಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರ ಜಮೀರ್ ಅಹ್ಮದ್ ಅವರು ಶೇಷಾದ್ರಿಪುರಂ ಮಸೀದಿಯಲ್ಲಿ ದೇಶ ಕಾಯುತ್ತಿರುವ ಸೈನಿಕರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರಿಗೆ ಶ್ರೇಯಸ್ಸು ಕೋರಿ ಪ್ರಾರ್ಥನೆ ಸಲ್ಲಿಸಲಾಯಿತು.
ಏ. 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ 80 ರಿಂದ 100 ಉಗ್ರರನ್ನು ಹತ್ಯೆ ಮಾಡಿತ್ತು. ಇದನ್ನೂ ಓದಿ: ʼಕೈʼ ನಾಯಕರಿಂದ ತಿರಂಗಾ ಯಾತ್ರೆ!
ಇದಾದ ಬಳಿಕ ಪಾಕಿಸ್ತಾನವು ಭಾರತದ ಮೇಲೆ ಪ್ರತಿ ದಾಳಿ ಶುರು ಮಾಡಿದು, ಗಡಿಗಳ ಉದ್ದಕ್ಕೂ ಗುಂಡಿನ ದಾಳಿ ನಡೆಸಿದ್ದು, ಅನೇಕ ನಾಗರಿಕರನ್ನು ಹತ್ಯೆ ಮಾಡಿತ್ತು, ಹೀಗಾಗಿ ಕೋಪಗೊಂಡ ಭಾರತ ಮತ್ತೆ ಪಾಕ್ ವಿರುದ್ಧ ದಾಳಿಗೆ ನಿಂತಿದೆ.
ಉಗ್ರರ ವಿರುದ್ಧ ಹೋರಾಡಲು ಅಖಾಡಕ್ಕಿಳಿದಿರುವ ಭಾರತೀಯ ಸೈನ್ಯಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಇಂದು ರಾಜ್ಯದಲ್ಲಿರುವ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.