ತಿರುವನಂತಪುರ ; ಶಬರಿಮಲೆ ಯಾತ್ರೆ ಕೈಗೊಳ್ಳುವ ಅಪ್ಪನೊಂದಿಗೆ ಅಪ್ರಾಪ್ತ ಬಾಲಕಿಯರು ದೇವರ ದರ್ಶನಕ್ಕೆ ತೆರಳಲು ಕೇರಳ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.
ಯಾತ್ರೆ ಕೈಗೊಳ್ಳುವವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಹಾಗೂ ಲಸಿಕೆ ಪಡೆಯಲು ಸಾಧ್ಯವಿಲ್ಲದ ಅಪ್ರಾಪ್ತ ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ಹೋಗಬಾರದು ಎಂದು ಕೇರಳ ಸರ್ಕಾರ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಿದ್ದ 9 ವರ್ಷದ ಬಾಲಕಿ ತನ್ನ ತಂದೆಯೊಂದಿಗೆ ಶಬರಿಮಲೆಗೆ ಹೋಗಲು ಅನುಮತಿ ಕೋರಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದಳು. ಬಾಲಕಿ ಸಲ್ಲಿಸಿದ ಮನವಿಯ ಮೇರೆಗೆ ಈ ಆದೇಶ ಬಂದಿದೆ.