ಸಿಎಂ, ಡಿಸಿಎಂ ಸೇರಿದಂತೆ 36 ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಸಮನ್ಸ್

ಸಿಎಂ, ಡಿಸಿಎಂ ಸೇರಿದಂತೆ 36 ಕಾಂಗ್ರೆಸ್​ ನಾಯಕರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ 36 ಮುಖಂಡರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ಸಮನ್ಸ್ ನೀಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ನಿಂದ‌ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆ ನೀಡಿದೆ.

Related