ಡಿ.ಸುಧಾಕರ್​ಗೆ 2ನೇ ಬಾರಿ ಮಂತ್ರಿಗಿರಿ- ಮೂಲಸೌಕರ್ಯ

ಡಿ.ಸುಧಾಕರ್​ಗೆ 2ನೇ ಬಾರಿ ಮಂತ್ರಿಗಿರಿ- ಮೂಲಸೌಕರ್ಯ

ಚಿತ್ರದುರ್ಗ: ಹಿರಿಯೂರು ಶಾಸಕ ಡಿ.ಸುಧಾಕರ್ ಗೆ ಮಂತ್ರಿಗಿರಿ ಒಲಿದಿದ್ದು, ಇಂದು ಅವರು ಮೂಲಸೌಕರ್ಯ ಇಲಾಖೆಗೆ ಮಂತ್ರಿಗಿರಿ  ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶದಲ್ಲಿ 30322 ಮತಗಳ ಅಂತದಿಂದ 2018ರಲ್ಲಿ ಮೊದಲಬಾರಿ ಬಿಜೆಪಿಯಿಂದ ಸ್ಪರ್ಧಿಸಿ 12,857 ಮತಗಳ ಅಂತರದಿಂದ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್​ರವರ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು ಜೈನ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಶಾಸಕ ಡಿ.ಸುಧಾಕರ್ ಅವರು ನಾಲ್ಕು ಬಾರಿ ಶಾಸಕರಾಗಿದ್ದವರು. ಇವರು 2008ರಲ್ಲಿ ಪಕ್ಷೇತರರಾಗಿ ಗೆದ್ದು ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಇಂದು ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Related