ಸದ್ಯಕ್ಕಿಲ್ಲ ರಾಯರ ದರ್ಶನ

ಸದ್ಯಕ್ಕಿಲ್ಲ ರಾಯರ ದರ್ಶನ

ಬೆಂಗಳೂರು : ಮಂತ್ರಾಲಯ ಶ್ರೀಮಠ ಸದ್ಯಕ್ಕೆ ತೆರೆಯುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕೆಂದು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕರು ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಎದುರಾಗಿದ್ದ ಲಾಕ್‍ಡೌನ್ ಮುಗಿದ ನಂತರ ಜೂ.15ರಿಂದ ರಾಯರ ದರ್ಶನ ಸಿಗಲಿದೆ ಎಂದು ತಿಳಿಸಲಾಗಿತ್ತು. ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರೆಯುತ್ತಿರುವುದರಿಂದ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು, ಮಠದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಠ ತೆರೆಯುವ ಮುಂದೂಡಲಾಗಿದೆ ಎಂದು ಶ್ರೀ ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಷಿ ತಿಳಿಸಿದ್ದಾರೆ.

ಮಠದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಧುನಾತನ ಪರಿಕರಗಳನ್ನು ಜೋಡಿಸುವ ಕಾರ್ಯ ಪ್ರಗತಿಯಲ್ಲಿರುವುದರಿಂದ ರಾಯರ ದರ್ಶನ ಮತ್ತಷ್ಟು ಸಮಯಾವಕಾಶ ಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Related