ಮಾನವ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇಗುಲದಲ್ಲಿ ಕಾಲಿಡಲು ಅವಕಾಶವಿಲ್ಲ ಸಿಎಂ

ಮಾನವ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇಗುಲದಲ್ಲಿ ಕಾಲಿಡಲು ಅವಕಾಶವಿಲ್ಲ ಸಿಎಂ

ಕೋಲಾರ: ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ 2 ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ನಡೆದಿವೆ. ಇದು ಮನ ಕಲುಕಿದೆ. ಸಮಾಜದಲ್ಲಿ ಅಂತರ್ಜಾತಿ ವ್ಯವಸ್ಥೆ, ಸಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿ ಇಂತಹ ಘಟನೆಗಳು ಪ್ರತಿಫಲಿಸುತ್ತವೆ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ಕಾನೂನಾತ್ಮಕ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೋಲಾರದಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನಿಡಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೆ ಲೋಪವಾಗದಂತೆ ಎಚ್ಚರವಹಿಸಲಿದೆ ಎಂದು ಹೇಳಿದರು. ಇನ್ನು ಕೋಲಾರದ ತೊಟ್ಲಿ ಗ್ರಾಮದಲ್ಲಿ ವರಮಹಾಲಕ್ಷ್ಮೀ ಹಬ್ಬದ ದಿನವೇ ವೆಂಕಟೇಶಗೌಡ ಎಂಬುವರು ತಮ್ಮ 19 ವರ್ಷದ ಮಗಳನ್ನೇ ಕೊಂದು ಹಾಕಿದ್ದರು. ಮಗಳು ಬೇರೆ ಸಮುದಾಯದ ಅಪ್ರಾಪ್ತ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಮಗಳ ಪ್ರಾಣ ತೆಗೆದಿದ್ದರು. ರಾಜ್ಯದಲ್ಲಿ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಪ್ರಕರಣಗಳು ನಡೆದಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇಂತಹ ವಿಕೃತ ಮನಸ್ಥಿತಿ ಸೃಷ್ಠಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನ, ಮನೆಗಳಲ್ಲಿ ಕಾಲಿರಿಸಲು ಅವಕಾಶ ನೀಡದ ಆಚರಣೆ, ಸಂಪ್ರದಾಯ ನಮ್ಮಲ್ಲಿವೆ. ಜಾತಿ ಸಂರಚನೆಯ ಕಟ್ಟು ಪಾಡುಗಳನ್ನ ಮೀರಲು ಮಾನವೀಯತೆ, ವಿಚಾರಪರತಯೆ ದಾರಿ, ಜಾಗೃತಿಯೇ ಅಸ್ತ್ರ. ಸಮಾಜವನ್ನ ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲಾ ಸಮಾಜ ಸುಧಾರಕರ ಆಶಯ ಮತ್ತು ಆದರ್ಶಗಳನ್ನು ವ್ಯಾಪಕವಾಗಿ ಪ್ರಚಾರಪಡಿಸುವುದು ಅಗತ್ಯವಾಗಿದೆ, ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮ ಗಳಿಗೆ ಮುಂದಾಗಲಿದೆ. ಹೀಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಕೋಲಾರದ ಮರ್ಯಾದೆ ಹತ್ಯೆ ಕುರಿತು ಬರೆದುಕೊಂಡಿದ್ದಾರೆ.

ವರದಿಗಾರ

ಎ.ಚಿದಾನಂದ,ವಿಜಯನಗರ.

Related