ದುಷ್ಕರ್ಮಿಗಳ ವಿರುದ್ಧ ಸಿಡಿದೆದ್ದ ನಟ ದರ್ಶನ್

ದುಷ್ಕರ್ಮಿಗಳ ವಿರುದ್ಧ ಸಿಡಿದೆದ್ದ ನಟ ದರ್ಶನ್

ಬೆಂಗಳೂರು :  ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ಪ್ರತಿಷ್ಠಾಪಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಧ್ವಂಸಗೊಳಿಸಿದ್ದಕ್ಕೆ ಅವರ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ವಿಷ್ಣುದಾದಾರ ಪ್ರತಿಮೆಯನ್ನು ಧ್ವಂಸ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳನ್ನು ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಮೈಸೂರಿನಲ್ಲಿ ವಿಷ್ಣು ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಯಾವುದೇ ವ್ಯಕ್ತಿಗೆ ಅಪಮಾನ ಆಗಬಾರದು. ವಿಷ್ಣು ಪುತ್ಥಳಿಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸಚಿವ ವಿ.ಸೋಮಣ್ಣ ಕೂಡ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಅಷ್ಟೇ ಅಲ್ಲ ಕನ್ನಡ ಚಿತ್ರರಂಗ ಸೇರಿದಂತೆ ಕನ್ನಡಿಗರೂ ಕೂಡ ಈ ದುಷ್ಕೃತ್ಯವನ್ನು ಖಂಡಿಸಿದ್ದಾರೆ. ಇದೀಗ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ವಿಷ್ಣು ಅವರಿಗೆ ಅಪಮಾನ ಮಾಡಿದ್ದಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ. ವಿಷ್ಣು ಸರ್ ಪುತ್ಥಳಿಯನ್ನು ಕಿಡಿಗೇಡಿಗಳು ಯಾರೂ ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಯ ಸಂಗತಿ. ಇಂತಹ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ವಿಷ್ಣು ಅವರ ಅಳಿಯ ಅನಿರುದ್ಧ್ ಕೂಡ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

 

Related