ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಧ್ಯಂತರ ಷರತ್ತುಬದ್ಧ ಜಾಮೀನು ಮೇಲೆ ಶಸ್ತ್ರ ಚಿಕಿತ್ಸೆಗೆಂದು ಹೊರಬಂದು ಈಗಾಗಲೇ ವಾರಗಳೇ ಕಳೆದರೂ ಕೂಡ ದರ್ಶನ್ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿಲ್ಲ ಎಂಬ ಆರೋಪ ಜೋರಾಗಿ ಕೇಳುತ್ತಿದ್ದು ದರ್ಶನ್ಗೆ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಈಗಾಗಲೇ ಎಲ್ಲಾ ರೀತಿ ತಯಾರಿಗಳನ್ನು ಮಾಡಿಕೊಳ್ಳದೆ ಎಂದು ತಿಳಿದುಬಂದಿದೆ.
ಹೌದು, ದರ್ಶನ್ ಅವರು ಈವರೆಗೆ ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇಂದು (ಮಂಗಳವಾರ ನ. 26) ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಅಲ್ಲಿ ಈ ಎಲ್ಲಾ ವಿಚಾರಗಳು ಮತ್ತೊಮ್ಮೆ ಚರ್ಚೆಗೆ ಬರೋ ಸಾಧ್ಯತೆ ಇದೆ.
ಅನಾರೋಗ್ಯ ಕಾರಣಕ್ಕೆ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದಾರೆ. ಆದರೆ ಈವರೆಗೂ ಸರ್ಜರಿ ಮಾಡಿಸದೇ ಇರುವ ಬಗ್ಗೆ ಉತ್ತರಿಸಬೇಕಾದ ಅನಿವಾರ್ಯತೆ ಇದೆ. ಸೂಕ್ತ ವಿವರಣೆ ನೀಡದಿದ್ದರೆ ಮಧ್ಯಂತರ ಜಾಮೀನು ಹಿಂಪಡೆಯಲು ಕೋರ್ಟ್ಗೆ ಅವಕಾಶವಿದೆ. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್; ಪೊಲೀಸರಿಗೆ ಸಿಕ್ತು ಮತ್ತೊಂದು ಪ್ರಬಲ ಸಾಕ್ಷಿ!
ಆರೋಪಿಗಳೊಂದಿಗೆ ದರ್ಶನ್ ತೆಗೆಸಿಕೊಂಡಿದ್ದ ಫೋಟೋ ಪೊಲೀಸರಿಗೆ ಈಗ ಸಿಕ್ಕಿದೆ. ಇದು ಪ್ರಕರಣಕ್ಕೆ ಪ್ರಮುಖ ಸಾಕ್ಷಿ ಎನಿಸಿಕೊಂಡಿದೆ. ದರ್ಶನ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬುದಕ್ಕೆ ಈ ಫೋಟೋಗಳು ಸಾಕ್ಷಿ ನೀಡುವ ರೀತಿಯಲ್ಲಿ ಇದೆ. ಈ ವಿಚಾರವಾಗಿ ಪೊಲೀಸರು ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದೆಲ್ಲವನ್ನೂ ಆಧರಿಸಿ ಸರ್ಕಾರಿ ಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಲಿದ್ದಾರೆ.
ದರ್ಶನ್ ಈವರೆಗೂ ಸರ್ಜರಿ ಮಾಡಿಸದ ಬಗ್ಗೆ ಪ್ರಸನ್ನಕುಮಾರ್ ವಾದ ಮಂಡಿಸಿದ್ದರು. ಆ ಬಳಿಕ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಕೋರ್ಟ್ಗೆ ವೈದ್ಯಕೀಯ ವರದಿ ನೀಡಿದ್ದರು. ದರ್ಶನ್ ಅವರಿಗೆ ರಕ್ತದ ಒತ್ತಡ ಇರುವ ಕಾರಣದಿಂದ ಸರ್ಜರಿ ತಡವಾಗಿದೆ ಎಂದಿದ್ದರು. ಅವರನ್ನು ಶಸ್ತ್ರಚಿಕಿತ್ಸೆಗೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಪ್ರಾಸಿಕ್ಯೂಷನ್ ಪರ ವಕೀಲರಿಗೆ ರಿಪೋರ್ಟ್ ಪಡೆದು ಪ್ರತಿಕ್ರಿಯಿಸುವಂತೆ ವಿಚಾರಣೆ ಮುಂದಕ್ಕೆ ಹಾಕಲಾಗಿತ್ತು.
ಮಧ್ಯಂತರ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ಅವರು ಇವರಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳದಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.