ದಸರಾ : ಸರಳ ಆಚರಣೆಗೆ ತೀರ್ಮಾನ

ದಸರಾ : ಸರಳ ಆಚರಣೆಗೆ ತೀರ್ಮಾನ

ಬೆಂಗಳೂರು : ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಂದು ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿ, ಅವರು ಕೊರೋನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆ ಕೈ ಬಿಡದೆ ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು.

Related