ಇಂದು ಹೈಕೋರ್ಟ್ʼನಲ್ಲಿ ಡಿಸಿಎಂ​​ ಅರ್ಜಿ ವಿಚಾರಣೆ

ಇಂದು ಹೈಕೋರ್ಟ್ʼನಲ್ಲಿ ಡಿಸಿಎಂ​​ ಅರ್ಜಿ ವಿಚಾರಣೆ

ಬೆಂಗಳೂರು: ಆದಾಯ ಮೇಲೆ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಬಾರಿ ಡಿಕೆ ಶಿವಕುಮಾರ್ ಅವರು ಕೋರ್ಟ್ ಮೆಟ್ಟಿಲೇರಿದ್ದು, ಇಂದು ಸಿಐವಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.

ಆದಾಯ ಮೀರಿ ಅಕ್ರಮ ಆಸ್ತಿಗಳಿಗೆ ಪ್ರಕರಣವನ್ನು CBI ತನಿಖೆ ನಡೆಸಲು ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಮ್ಮತಿಯನ್ನು ಹಿಂಪಡೆದಿದೆ. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆ ಇಂದು ನ್ಯಾ.ಕೆ.ಸೋಮಶೇಖರ್, ನ್ಯಾ. ಉಮೇಶ್ ಎಂ.ಅಡಿಗರ ಅವರಿರುವ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.

 

Related