ಡಿಸಿಎಂ ರಾಜೀನಾಮೆಗೆ ಒತ್ತಾಯ 

ಡಿಸಿಎಂ ರಾಜೀನಾಮೆಗೆ ಒತ್ತಾಯ 

ಮುದ್ದೇಬಿಹಾಳ : ಡಿಸಿಎಂ ಗೋವಿಂದ ಕಾರಜೋಳ ಅವರು ಬಂಜಾರ ಜನಾಂಗದವರ ವಿರುದ್ಧ ಸಂವಿಧಾನ ವಿರೋಧಿ ನಿಲುವು ಅನುಸರಿಸುತ್ತಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಧಿಕ್ಕಾರ ಕೂಗಿದ ಘಟನೆ ತಾಲೂಕಿನ ರೂಢಗಿ ತಾಂಡಾದಲ್ಲಿ ನಡೆದಿದೆ.

ಲಂಬಾಣಿ ಜನಾಂಗವನ್ನು ಎಸ್. ಸಿ. ಪಟ್ಟಿಯಿಂದ ಕೈ ಬಿಡದಂತೆ ಸರಕಾರ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕಿನ ರೂಢಗಿ ತಾಂಡಾದಲ್ಲಿ ಹಮ್ಮಿಕೊಂಡಿದ್ದ ಪತ್ರ ಚಳವಳಿ ಪ್ರತಿಭಟನೆಯಲ್ಲಿ ಮಾತನಾಡಿರುವ ಬಂಜಾರ ಸಮಾಜದ ಮುಖಂಡ ಎಸ್.ಪಿ. ಸೇವಾಲಾಲ್, ಡಿಸಿಎಂ ಗೋವಿಂದ ಕಾರಜೋಳ ಅವರು ಬಂಜಾರರನ್ನು ಎಸ್.ಸಿ ಪಟ್ಟಿಯಿಂದ ಕೈ ಬಿಡುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ.
ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ 50ಕ್ಕೂ ಹೆಚ್ಚು ಜನರಿದ್ದ ಗುಂಪು ಡಿಸಿಎಂ ಕಾರಜೋಳ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.

Related