ಡಿಸಿಎಂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ: ಸತೀಶ್ ಜಾರಕಿಹೊಳಿ

ಡಿಸಿಎಂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಇತ್ತೀಚಿಗೆ ಡಿಕೆ ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ನಡುವೆ ಮನಸ್ತಾಪ ಇದೆ ಎಂದು ರಾಜ್ಯ ರಾಜಕಾರಣಿದಲ್ಲಿ ಮಾತುಕತೆ ನಡೆಯುತ್ತಿದ್ದು ಇದರ ಬಗ್ಗೆ ಖುದ್ದು ಸತೀಶ್ ಜಾರಕಿಹೊಳಿ ಅವರೇ ಪ್ರತಿಕ್ರಿಯೆ ನೀಡಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಮನಸ್ತಾಪವಿಲ್ಲ ನಮ್ಮಿಬ್ಬರ ನಡುವೆ ಅಂತದ್ದೇನು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ತನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಪ್ಯಾಚ್ ಅಪ್ ನಂಥ ಸ್ಥಿತಿ ಉಂಟಾಗಲು ಅಂಥದ್ದೇನೂ ನಡೆದಿಲ್ಲ ಎಂದು ಹೇಳಿದರು.

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಶಿವಕುಮಾರ್ ತಮ್ಮ ಮನೆಗೆ ಬಹಳಷ್ಟು ಸಲ ಬಂದಿದ್ದಾರೆ, ಡಿಕೆ ಸುರೇಶ್ ಸಹ ಇದೇ ವಿಚಾರಕ್ಕೆ ಒಂದೆರಡು ಸಲ ಬಂದಿದ್ದಾರೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಅವರು ರಾಜ್ಯ ನಾಯಕರ ಮುಂದೆ ಸದ್ಯಕ್ಕೆ ಲೋಕ ಸಭಾ ಚುನಾವಣೆ ಬಿಟ್ಟರೆ ಬೇರೆ ಯಾವ ವಿಚಾರಗಳಿಲ್ಲ, ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದರು.

Related