ಬೆಂಗಳೂರು: ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರಿಗೆ ನಿನ್ನೆ ರಾತ್ರಿಯಿಂದ ಅನಾರೋಗ್ಯ ಉಂಟಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಡಿಕೆ ಶಿವಕುಮಾರ್ ಅವರಿಗೆ ವೈರಲ್ ಫೀವರ್ ಬಂದಿರಬಹುದು ಎಂದು ಹೇಳಲಾಗುತ್ತಿದೆ. ಇನ್ನು ಬಿಡುವಿಲ್ಲದೆ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿರಬಹುದು ಎಂದು ಕೂಡ ಹೇಳಲಾಗುತ್ತಿದೆ.
ಈ ಹಿನ್ನೆಲೆ ಇಂದು ಬೆಳಗ್ಗೆ ಸದಾಶಿವ ನಗರದ ನಿವಾಸಕ್ಕೆ ವೈದ್ಯರು ಬಂದು ತಪಾಸಣೆ ಮಾಡಿದ್ದಾರೆ. ಶಾಸಕ ಹಾಗೂ ವೈದ್ಯರೂ ಆಗಿರುವ ಕುಣಿಗಲ್ ರಂಗನಾಥ್ ಜೊತೆಗೆ ಆಗಮಿಸಿದ ವೈದ್ಯರು ಡಿಕೆ ಶಿವಕುಮಾರ್ ಅವರನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಸದ್ಯ ಸದಾಶಿವ ನಗರದ ತಮ್ಮ ಮನೆಯಲ್ಲಿ ಇರೋ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.