ನಿರ್ಮಲಾ ಸೀತಾರಾಮ್ ಭೇಟಿ ಮಾಡಿದ ಡಿಸಿಎಂ

ನಿರ್ಮಲಾ ಸೀತಾರಾಮ್ ಭೇಟಿ ಮಾಡಿದ ಡಿಸಿಎಂ

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ್ ಅವರನ್ನು ಸಂಸತ್ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಡುತ್ತಿರುವ ಬರಗಾಲ ಹಿಡಿತ ಕುರಿತು ಇಂದು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಅವರ ಮುಂದೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕೂಡಲೇ ಕರ್ನಾಟಕ ರಾಜ್ಯದಲ್ಲಿರುವ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಡಿಕೆ ಶಿವಕುಮಾರ್ ಅವರು ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

 

Related