ಮಂಡ್ಯದಲ್ಲಿ ಡಿಸಿಎಂ ಭರ್ಜರಿ ಪ್ರಚಾರ

ಮಂಡ್ಯದಲ್ಲಿ ಡಿಸಿಎಂ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವೆಂಕಟರಮಣೇಗೌಡ ಅವರ ನಾಮಪತ್ರವನ್ನು ಸಲ್ಲಿಸಲಾಯಿತು.

ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಮಂಡ್ಯದಲ್ಲಿ ವೆಂಕಟರಮಣೇಗೌಡ ಪರವಾಗಿ ಪ್ರಚಾರವನ್ನು ಕೈಗೊಂಡು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಾವಿಂದು ಟಿಕೆಟ್ ನೀಡಿದ್ದೇವೆ. ಮಂಡ್ಯದ ಜನತೆ ಬಹಳ ಬುದ್ಧಿವಂತರಿದ್ದಾರೆ. ಮಂಡ್ಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಉತ್ತರ ನೀಡಿದರು.

ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ನರೇಂದ್ರಸ್ವಾಮಿ, ರವಿ ಗಣಿಗ, ರವಿಶಂಕರ್, ಉದಯಗೌಡ, ರಮೇಶ್ ಬಂಡಿಸಿದ್ದೇಗೌಡ, ಶರತ್ ಬಚ್ಚೇಗೌಡ, ಎಂಎಲ್ಸಿ ದಿನೇಶ್ ಗೂಳಿಗೌಡ, ಇತ್ತೀಚೆಗೆ ಜೆಡಿಎಸ್ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಗೆ ಬಂದ ಮರಿತಿಬ್ಬೆಗೌಡ ಮತ್ತಿತರರು ಮೆರವಣಿಗೆಯಲ್ಲಿ ಇದ್ದರು.

Related