ಸತ್ತರೇ ಇಲ್ಲೇ ಸಾಯುತ್ತೇನೆ

ಸತ್ತರೇ ಇಲ್ಲೇ ಸಾಯುತ್ತೇನೆ

ಬೆಂಗಳೂರು,ಮಾ. 15 : ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ತುಮಕೂರು ಮೂಲದ ವಿದ್ಯಾರ್ಥಿಯೊಬ್ಬನಿಗೆ ಯಾವುದೇ ರೀತಿಯ ವೈರಸ್ ಇಲ್ಲ. ಆದರೆ, ಭಾರತಕ್ಕೆ ಬರುವ ಸಂದರ್ಭದಲ್ಲಿ ವೈರಸ್ ತಗುಲಬಹುದು ಎಂಬ ಆತಂಕದಿಂದ ವಾಪಸ್ ಬರಲು ಹಿಂದೇಟು ಹಾಕುತ್ತಿದ್ದಾನೆ. ತುಮಕೂರಿನ ಶಿಕ್ಷಕ ಹೊಸಕೆರೆ ರಿಜ್ವಾನ್ ಭಾಷಾ ಅವರ ಕಿರಿಯ ಪುತ್ರ ಸಾಹಿಲ್ ಹುಸೇನ್ ಕಳೆದ ಮೂರು ವರ್ಷಗಳಿಂದ ಚೀನಾದ ವಾನ್ಲಿ ಜಿಲ್ಲೆಯಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿನ ನಾಚಂಗ್ ಸಿಟಿಯ ‘ಜಿಯಾಂಗ್ಸಿ ಯೂನಿವರ್ಸಿಟಿ ಆಫ್ ಟ್ರಡಿಷನಲ್ ಅಂಡ್ ಚೈನೀಸ್ ಮೆಡಿಸಿನ್ಸ್’ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅವರು 3ನೇ ವರ್ಷದ ಎಂಬಿಬಿಎಸ್ ಅಧ್ಯಯನ ಮಾಡುತ್ತಿದ್ದಾನೆ . ಈತ ಆನ್ ಲೈನ್ ಮೂಲಕವೇ ಪಾಠವನ್ನು ಮುಂದುವರಿಸಿದ್ದಾರೆ.

ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ ಎಂಬ ಮಾತನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಾಹಿಲ್, ಈ ಕುರಿತಂತೆ ತನ್ನ ಪೋಷಕರಿಗೂ ಕೂಡ ಮಾಹಿತಿಯನ್ನು ತಿಳಿಸಿದ್ದಾರೆ.

Related