ದಶಕಗಳ ಬೇಡಿಕೆ ಈಡೇರಿಸಿದ : ಸಚಿವೆ

ದಶಕಗಳ ಬೇಡಿಕೆ ಈಡೇರಿಸಿದ :  ಸಚಿವೆ

ವಿಜಯಪುರ : ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೋವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆ ಈಡೇರಿಸಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಿಸಿ. 2010 ರಿಂದ ಬಗೆ ಹರಿಯದ ಪ್ರಕರಣವನ್ನು ಬಗೆ ಹರಿಸಿ ನಿಜವಾದ ಫಲಾನುಭವಿಗಳಿಗೆ ಸಚಿವ ಶಶಿಕಲಾ ಜೊಲ್ಲೆಯವರು ನಿರಾಶ್ರೀತರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.

Related