ಡಬ್ಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿ: ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ

ಡಬ್ಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿ: ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ

ಬೊಮ್ಮನಹಳ್ಳ: ಕೇಂದ್ರ ಹಾಗೂ ರಾಜ್ಯದಲ್ಲಿ ಡಬ್ಬಲ್ ಇಂಜಿನ್ ಸರ್ಕಾರದ ಅಭಿವೃದ್ದಿ, ಜನತೆಗಾಗಿ ತಂದಿರುವ ಯೋಜನೆಗಳನ್ನು ಗಮನಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಿಜೆಪಿಗೆ ಮತ ಹಾಕುವಂತೆ ಬಿಟಿಎಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿಯವರು ಜನತೆಯಲ್ಲಿ ಮನವಿ ಮಾಡಿದರು.

ಇಂದು ಆಡುಗೋಡಿ, ಕೋರಮಂಗಲ, ಕ್ಷೇತ್ರದ ಇನ್ನಿತರೆಡೆ ಮನೆ ಮನೆಗಳಿಗೆ ತೆರಳಿ ಬಿಜೆಪಿ ಪಕ್ಷದ ಅಭಿವೃದ್ದಿ ಕರ್ಯಗಳನ್ನು ಜನರಿಗೆ ತಿಳಿಸಿ, ಕ್ಷೇತ್ರದ ಜನತೆ ಈ ಭಾರಿ ಬಿಜೆಪಿಗೆ ಮತ ನೀಡಿ ನನ್ನನ್ನು ಹರಸಿ ಎಂದು ಮನವಿ ಮಾಡಿದರು.

ಹಲವಾರು ವರ್ಷಗಳಿಂದ ಕಾಂಗ್ರೆಸ್‌ನಿಂದ ಬೇಸತ್ತಿರುವ ಕ್ಷೇತ್ರದ ಪ್ರಜ್ಞಾವಂತ ಮತದಾರರು ಈ ಭಾರಿ ಬಿಜೆಪಿಗೆ ಮತ ನೀಡುತ್ತಾರೆಂಬ ನಂಬಿಕೆ ನನಗಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ಸರಳಾ ಮಹೇಶ್, ಬಿಜೆಪಿ ಮುಖಂಡ ಜಯದೇವ್ ಮತ್ತಿತರರು ಭಾಗವಹಿಸಿದ್ದರು.

Related