ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ನಗರದ ಅಭಿವೃದ್ದೀಕರಣ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಫಿಕ್ಸ್ ಮೈ ಸ್ಟ್ರೀಸ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಸಲುವಾಗಿ ಅಭಿವೃದ್ಧಿಪಡಿಸಿರುವ ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ಮೂಲಕ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿಗಳು ಯಾವ ರಸ್ತೆಯಲ್ಲಿ ಗುಂಡಿಗಳಿವೆ, ಎಷ್ಟು ಗುಂಡಿಗಳಿವೆ ಎಂಬುದನ್ನು ಜಿಯೋ ಲೊಕೇಷನ್ ಉಳ್ಳ ಛಾಯಾಚಿತ್ರಗಳನ್ನು ಆ್ಯಪ್ ನಲ್ಲಿ ಅಪ್ಲೋಡ್ ಮಾಡಬೇಕು. ಆ ಬಳಿಕ ರಸ್ತೆ ಗುಂಡಿ ಸುತ್ತಳತೆ ಪರಿಶೀಲಿಸಿ ಪಾಲಿಕೆಯ ಬ್ಯಾಚ್ ಮಿಕ್ಸ್ ಪ್ಲಾಂಟ್ ನಿಂದ ಡಾಂಬರು ಪಡೆದು ಗುತ್ತಿಗೆದಾರರ ಮೂಲಕ ನಿಯಮಾನುಸಾರ ಗುಂಡಿಯ ನಾಲ್ಕು ಭಾಗವನ್ನು ಕತ್ತಿರಿಸಿ ಗುಣಮಟ್ಟವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶೇ. 37 ರಷ್ಟು ರಸ್ತೆ ಗುಂಡಿಗಳನ್ನು ಪರಿಶೀಲಿಸಿ:

ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ಮೂಲಕ ಗಣಕೀಕೃತ ಮಾಹಿತಿಯನ್ನು ಆಯಾ ವಲಯಾನುಸಾರ ಒಟ್ಟು ಮುಚ್ಚಿರುವ ಗುಂಡಿಗಳಲ್ಲಿ ಶೇ. 1 ರಷ್ಟು ವಲಯ ಆಯುಕ್ತರು, ಶೇ. 5 ರಷ್ಟು ಮುಖ್ಯ ಇಂಜಿನಿಯರ್ ಗಳು, ಶೇ. 30 ರಷ್ಟು ಕಾರ್ಯಪಾಲಕ ಇಂಜಿನಿಯರ್ ಗಳು ಪರಿಶೀಲನೆರ‍್ಯಾಂಡಮ್ ಚೆಕ್) ನಡೆಸುವಂತೆ ಆ್ಯಪ್ ನಲ್ಲಿ ವ್ಯವಸ್ಥೆ ಕಲ್ಪಿಸಬೇಕೆಂದು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವುದನ್ನು ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ನಲ್ಲಿ ನಾಗರೀಕರು ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಪಿ.ಎನ್ . ರವೀಂದ್ರ, ಇಂಜಿನಿಯರ್ ವಿಭಾಗದ ಮುಖ್ಯಸ್ಥರಾದ ವಿಶ್ವನಾಥ್ (ಪ್ರಭಾರ), ರಸ್ತೆ ಮೂಲಭೂತ ಸೌಕರ್ಯ/ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್ ಗಳು, ಎಲ್ಲಾ ವಲಯ ಮುಖ್ಯ ಇಂಜಿನಿಯರ್ ಗಳು, ಕಾರ್ಯಪಾಲಕ ಇಂಜಿನಿಯರ್ ಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related