ಬೆಂಗಳೂರು: ನಿವೃತ್ತ ಡಿಸಿಪಿ ಬರ್ಬರ ಹತ್ಯೆಯು ಇಡೀ ರಾಜ್ಯದ ಜನರಿಗೆ ಅಚ್ಚರಿ ಎಂಬಂತಾಗಿದೆ.
ಹೌದು, ಬೆಂಗಳೂರು ನಗರದಲ್ಲಿ ಎಚ್ಎಸ್ಆರ್ ಬಡಾವಣೆಯ ನಿವಾಸಿಯಾಗಿರುವ ನಿವೃತ್ತ ಡಿಸಿಪಿ ಓಂ ಪ್ರಕಾಶ್ ಅವರ ಹತ್ಯೆಯನ್ನು ಸ್ವತಃ ಅವರ ಪತ್ನಿ ಕೊಂದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಡಿಜಿಪಿ ಅವರ ಪತ್ನಿ ಪಲ್ಲವಿ ಯವರನ್ನು ಅರೆಸ್ಟ್ ಮಾಡಲಾಗಿದೆ.
ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಇದನ್ನೂ ಓದಿ: BJP ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ! ಕಾರಣವೇನು ಗೊತ್ತಾ?
ಪುತ್ರ ಕಾರ್ತೀಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ ಸಹೋದರಿ ಕೃತಿ ವಿರುದ್ಧ ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 103(ಕೊಲೆ) 3(ಒಂದೇ ಉದ್ದೇಶಕ್ಕಾಗಿ ಒಟ್ಟಾಗಿ ಎಸಗಿದ ಅಪರಾಧ) ಅಡಿ ಪ್ರಕರಣ ದಾಖಲಾಗಿದೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಪತ್ನಿ ಪಲ್ಲವಿ ಮತ್ತು ಕೃತಿಯನ್ನು ಪೊಲೀಸರು ಬಂಧಿಸಿದ್ದಾರೆ.