ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸತೀಶ್ ರೆಡ್ಡಿ

ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸತೀಶ್ ರೆಡ್ಡಿ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ವತಿಯಿಂದ ನಡೆಯುತ್ತಿರುವ ಹಲವಾರು ಕಾಮಗಾರಿಗಳ ಕುರಿತು ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ಇನ್ನು ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಕಚೇರಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ‌ ಕುರಿತು ಮಾಸಿಕ ಸಭೆ ನಡೆಸಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ‌‌ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಬಿಬಿಎಂಪಿ ಅಧಿಕಾರಿಗಳಿಗೆ ಶಾಸಕರಾದ ಎಂ ಸತೀಶ್ ರೆಡ್ಡಿ ಅವರ ನಿರ್ದೇಶನ ನೀಡಿದರು.

ಈ ಸಂದರ್ಬದಲ್ಲಿ ಜಂಟಿ ಆಯುಕ್ತರಾದ ಅಜಿತ್ ಕುಮಾರ್ , ಬಿಬಿಎಂಪಿ ಅಧಿಕಾರಿಗಳು ಕೆ ಶಶಿ ಕುಮಾರ್ ಪಾಪಯ್ಯ ರೆಡ್ಡಿ, ಶ್ರೀನಿವಾಸ್ ಮತ್ತಿತರ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

Related