ಬಿಜೆಪಿ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ

ಬಿಜೆಪಿ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಹೌದು, ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಲ್ಲಿ ಹಿರಿಯ ಘಟಾನುಘಟಿಗಳಿಗೆ ಟಿಕೆಟ್ ನೀಡಿದ್ದ ಕಾರಣ ಸ್ವಪಕ್ಷಗಳ ಮೇಲೆ ಬಿಜೆಪಿ ಕಾರ್ಯಕರ್ತರು ಆಗ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಎಸ್ ಟಿ ಸೋಮಶೇಖರ್ ಅವರು ನಮ್ಮ ಬಿಜೆಪಿ ಪಕ್ಷದಲ್ಲಿಲ್ಲ ಅವರು ನಮ್ಮ ಪಕ್ಷದಿಂದ ಕಾಲು ಹೊರಗೆ ಇಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅಚ್ಚರಿ ಹೇಳಿಕೆಯನ್ನು  ಹೇಳಿದ್ದಾರೆ.

ಎಸ್ ಟಿ ಸೋಮಶೇಖರ್  ಅವರಿಗೆ ಕಾಂಗ್ರೆಸ್ ಜತೆ ಸಂಪರ್ಕದಲ್ಲಿ ಇದ್ದಾರೆ. ಅವರ ವಿರುದ್ಧ ಚುನಾವಣೆ ಬಳಿಕ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಹಾಕಿದ್ದಾರೆ. ನಮ್ಮ ಪಕ್ಷ ಬಿಟ್ಟು ಕಾಲು ಹೊರಗಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related