ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿಕಾಯ್ದೆಗಳನ್ನು ವಿರೋಧಿಸಿ ಕಳೆದ ನೆವೆಂಬರ್ನಿಂದ ದೆಹಲಿಯ ಗಡಿಭಾಗಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಇದು ದಲ್ಲಾಳಿಗಳ ಹೋರಾಟವಾಗಿದೆ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದು, ರೈತರು ಸಚಿವೆ ವಿರುದ್ಧ ಕಿಡಿಕಾರಿದ್ದಾರೆ.
ಶೋಭಾ ಕರಂದ್ಲಾಜೆಯನ್ನು ಮಂತ್ರಿಮಂಡಲದಿಂದ ವಜಾಗೊಳಿಸಬೇಕೆಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ಆಗ್ರಹಿಸಿದ್ದಾರೆ.
ಮಳೆ, ಬಿಸಿಲೆನ್ನದೆ ದೆಹಲಿಯ ಗಡಿಭಾಗಗಳಲ್ಲಿ ಹೋರಾಡುತ್ತಿರುವ ರೈತರನ್ನು ದಲ್ಲಾಳಿಗಳೆಂದು ಅವಮಾನಿಸಿದಕ್ಕೆ ಅನ್ನದಾತರ ಕ್ಷಮೆ ಕೇಳಬೇಕೆಂದು ಶಾಂತಾರಾಮ ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧವೂ ಕಿಡಿಕಾರಿದ್ದು, ಜನಾಶೀರ್ವಾದ ಯಾತ್ರೆ ಎಂದು ಮಂತ್ರಿಗಳು ಜಾತ್ರೆ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.