ವ್ಯಾಪಾರಿಗಳಿಗೆ ಛತ್ರಿ ವಿತರಣೆ

ವ್ಯಾಪಾರಿಗಳಿಗೆ ಛತ್ರಿ ವಿತರಣೆ

ಗೌರಿಬಿದನೂರು: ನಗರದ ಗಾಂಧಿ ವೃತ್ತದಲ್ಲಿ ಗಡಿ ಭಾಗದಲ್ಲಿ ಬಿಸಿಲಿನ ತಾಪ ಹೆಚ್ಚಗಿದ್ದು, ವ್ಯಾಪರ ವಾಹಿವಾಟು ನಡೆಸುವುದು ಕಷ್ಟಕರವಾಗಿದೆ. ಇದನ್ನು ಅರಿತ ಕೆ. ಹೆಚ್. ಪಿ ಫೌಂಡೇಷನ್ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಇಂದು ಛತ್ರಿ ವಿತರಿಸಲಾಯಿತು.

ಕೆ. ಹೆಚ್. ಪುಟ್ಟಸ್ವಾಮಿಗೌಡ ಮಾತನಾಡಿ ಬಿಸಿಲಿನ ತಾಪಮಾನ ತಾಳಲಾರದೆ ಹೊಟ್ಟೆಪಾಡಿಗಾಗಿ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುತ್ತಾರೆ. ಬೀದಿ ಬದಿ ವ್ಯಾಪಾರಿಗಳು ಮಳೆ ಗಾಳಿ ಬಿಸಿಲು ಲೆಕ್ಕಿಸದೆ ಹಣ್ಣು ತರಕಾರಿ ವ್ಯಾಪಾರ ವಹಿವಾಟಿನಲ್ಲಿ ನಿರತರಾಗಿರುತ್ತಾರೆ. ಸಮಾಜಕ್ಕೆ ಇವರ ಕೊಡುಗೆ ಅಪಾರವಾದದ್ದು, ಬಿಸಿಲು ಗಾಳಿ ಮಳೆಯ ತಡೆಗೆ ಛತ್ರಿ ಇವರಿಗೆ ಉಪಯೋಗವಾಗಲಿ ಎಂದು ಛತ್ರಿ ವಿತರಿಸಿದ್ದೆವೆ ಎಂದರು.

ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಬಿದಿ ಬದಿ ವ್ಯಾಪರಗಳ ಸಹಾಯಕ್ಕೆ ನಿಲ್ಲುವುದಾಗಿ ಭರವಸೆ ಕೊಟ್ಟರು.

Related