ಅಶೋಕ್‌ʼಗೆ ಡಿಕೆಶಿ ಟಾಂಗ್!

ಅಶೋಕ್‌ʼಗೆ ಡಿಕೆಶಿ ಟಾಂಗ್!

ಬೆಂಗಳೂರು: ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿ ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಧಾನಿಯವರಿಗೆ ಪ್ರೋಟೋಕಾಲ್ ಪಾಲನೆ ಮಾಡಲಿಲ್ಲವೆಂದು ಆರ್ ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡಿಗಿದ್ದರು.

ಇನ್ನು ಆರ್ ಅಶೋಕ್ ಅವರ ಮಾತಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ನಮಗೆ ಇದೆ. ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಕೇಂದ್ರ ಸರ್ಕಾರವೇ ಬರೋದು ಬೇಡ ಅಂತಾ ನಮಗೆ ಹೇಳಿತ್ತು.

ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಸ್ವಾಗತ ಮಾಡಿಸಿದ್ದೇವೆ. ಯಾರಿಗೆ ಎಷ್ಟು ಗೌರವ ಕೊಡಬೇಕು ಅಂತಾ ನಮಗೆ ಗೊತ್ತಿದೆ. ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ರೂ ಪ್ರಧಾನಿಗೆ ಗೌರವ ಕೊಡ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು.

Related