ಅಬ್ಬರದ ಪ್ರಚಾರದಲ್ಲಿ ತೊಡಗಿದ ಡಿಕೆಶಿ ಪತ್ನಿ

ಅಬ್ಬರದ ಪ್ರಚಾರದಲ್ಲಿ ತೊಡಗಿದ ಡಿಕೆಶಿ ಪತ್ನಿ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಯುಕ್ತ ಎಲ್ಲಾ ಅಭ್ಯರ್ಥಿಗಳು ಬರದಿಂದ ಪ್ರಚಾರವನ್ನು ಕೈಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿಕೆ ಸುರೇಶ್ ಅವರ ಪರವಾಗಿ ಇಂದು ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಡಿಕೆ ಶಿವಕುಮಾರ್ ಅವರು ಪ್ರಚಾರವನ್ನು ಕೈಗೊಂಡಿದ್ದಾರೆ.

ಪ್ರಾಚರಕ್ಕು ಮುನ್ನ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಶ್ರೀ ಸುಬ್ರಮಣ್ಯ ದೇಗುಲದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ, ಜೆಪಿ ಪಾರ್ಕ್ ಮತ್ತು ಸುಂದರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರ ಪರವಾಗಿ ಮತ ಯಾಚಿಸಿದರು.

ಉಷಾ ಡಿಕೆ ಶಿವಕುಮಾರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉಷಾ ಅವರಿಗೆ ತಿಲಕ ಇಡುವ ಮೂಲಕ ಪ್ರಚಾರಕ್ಕೆ ಸಾತ್ ನೀಡಿದರು.

Related