ಡಿಕೆಶಿಗೆ ಕುತ್ತು ತಂದ ಮಗಳ ನಿಶ್ಚಿತಾರ್ಥ!

ಡಿಕೆಶಿಗೆ ಕುತ್ತು ತಂದ ಮಗಳ ನಿಶ್ಚಿತಾರ್ಥ!

ಬೆಂಗಳೂರು: ಸೋಮವಾರ ಮಗಳ ನಿಶ್ಚಿತಾರ್ಥ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಾನೂನು ಸಂಕಷ್ಟ ಎದುರಾಗಿದೆ.

ಮಾಜಿ ಮುಖ್ಯಮಂತ್ರಿ, ಎಸ್.ಎಂ.ಕೃಷ್ಣ ಮೊಮ್ಮಗ ಹಾಗೂ ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಮಗ ಅಮಾರ್ಥ್ಯ ಹೆಗ್ಡೆ ಜತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ನಿಶ್ಚಯ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ನಿಶ್ಚಿತಾರ್ಥದ ವೇಳೆ ಕೊರೋನಾ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುನ್ನೆಚ್ಛರಿಕಾ ಕ್ರಮವಾಗಿ ಮಾಸ್ಕ್ ಧರಿಸದ ಹಿನ್ನಲೆಯಲ್ಲಿ ಹೈಕೋರ್ಟ್ನಲ್ಲಿ ದೂರು ದಾಖಲಾಗಿದೆ.

ವಕೀಲ ಜಿ.ಆರ್.ಮೋಹನ್‌ರಿಂದ ದೂರು ದಾಖಲಾಗಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜೂನ್ 18 ರಂದು ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

Related