ಅನಗತ್ಯ ಓಡಾಡಬೇಡಿ ಅಶೋಕ್ ಮನವಿ

ಅನಗತ್ಯ ಓಡಾಡಬೇಡಿ ಅಶೋಕ್ ಮನವಿ

ಬೆಂಗಳೂರು : ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲ ಸಾರ್ಗಜನಿಕವಾಗಿ ಅನಗತ್ಯವಾಗಿ ಓಡಾಡುವುದನ್ನು ನಿಲ್ಲಿಸಿ ಎಂದು ಬೆಂಗಳೂರಿನ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಆರ್. ಅಶೋಕ್ ಟ್ವೀಟ್ ಮಾಡಿದ್ದು, ಬೆಂಗಳೂರಿನ ಹಲವೆಡೆ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಅನಗತ್ಯ ಓಡಾಟಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸುತ್ತೇನೆ. ಅಗತ್ಯ ಕಾರ್ಯಗಳಿಗೆ ಹೊರಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡತಕ್ಕದು. ಸಾಮಾಜಿಕ ಅಂತರ ಕಾಯ್ದುಕೊಂಡೆ ತಮ್ಮ ವ್ಯಾಪಾರ-ವಹಿವಾಟು ಹಾಗೂ ಇತರ ಕೆಲಸಗಳನ್ನು ನಡೆಸಬೇಕು ಎಂದು ವಿನಂತಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ವೈರಸ್ ಸದ್ದಿಲ್ಲದಂತೆ ಹರಡುತ್ತಿದೆ. ದಿನೇ ದಿನೇ ಸೊಂಕಿತರ ಸಂಖ್ಯೆ ಏರುತ್ತಲೇ ಬರುತ್ತಿದೆ. ಪ್ರಸ್ತುತ ಅತಿ ಹೆಚ್ಚು ಸಕ್ರಿಯ ಸೋಂಕಿತರನ್ನು ಹೊಂದಿರುವ ಜಿಲ್ಲೆಗಳ ಪೈಕಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ.

ಜೂ.17 ರಂದು 55 ಪ್ರಕರಣಗಳು ಪತ್ತೆಯಾಗಿದ್ದು, ಅದೇ ಅತ್ಯಧಿಕ ಪ್ರಮಾಣದ ಸೋಂಕಿತರ ಸಂಖ್ಯೆಯಾಗಿತ್ತು. ಆದರೆ, ಶುಕ್ರವಾರ ಅದನ್ನೂ ಮೀರಿ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಸೋಂಕಿತರ ಸಂಖ್ಯೆ ಏರಿಕೆ ಒಂದು ಆಘಾತವಾದರೆ, ಏಳು ಸಾವಿನ ಪ್ರಕರಣಗಳು ವರದಿಯಾಗಿರುವುದು ಮತ್ತೊಂದು ಆಘಾತವಾಗಿದೆ. ಈ ಮೂಲಕ ಶುಕ್ರವಾರದ ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ರಾಜಧಾನಿ ಮೊದಲ ಸ್ಥಾನದಲ್ಲಿದೆ. ಒಟ್ಟು ಸೋಂಕಿತರ ಸಂಖ್ಯೆ 982 ಕ್ಕೆ ತಲುಪಿದೆ.

Related