ಬೆಂಗಳೂರು: ಅಕ್ರಮಣ ಆಸ್ತಿಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಐಬಿ ಆಗಾಗ ತನಿಖೆಗೆ ಕರೆ ನೀಡುತ್ತಲೇ ಇತ್ತು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಅಕ್ಟೋಬರ್ 19 ಗುರುವಾರ) ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೆ ಸಿಬಿಐ ತನಿಖೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಆರೋಪ ಹಿನ್ನೆಲೆ ಸಿಬಿಐನಲ್ಲಿ ಈ ಬಗ್ಗೆ ಕೇಸ್ ರದ್ದು ಕೋರಿದ್ದ ಅರ್ಜಿ ತೀರ್ಪು ಸಲ್ಲಿಸಲಾಗಿತ್ತು. ನ್ಯಾ. ಕೆ.ನಟರಾಜನ್ ಪೀಠದಿಂದ ಆದೇಶ ಸಂಪೂರ್ಣ ವಾಗಿದ್ದು ವಾದ ಪ್ರತಿವಾದ ಆಲಿಸಿತ್ತು. ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ಡಿಕೆ ವಿರುದ್ದ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು.
2014 – 2018ರ ಸಮಯದಲ್ಲಿ ಅಕ್ರಮ ಆಸ್ತಿಗಳಿಕೆ ಆರೋಪ ಈ ಸಂಬಂಧ ಸಿಬಿಐ ತನಿಖೆ ರದ್ದು ಕೋರಿದ್ದ ಡಿ.ಕೆ.ಶಿವಕುಮಾರ್. ಡಿಕೆ ಶಿವಕುಮಾರ್ ಪರ ಸಂದೇಶ್ ಚೌಟ ವಾದಿಸಿದ್ರು ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.