ಸಿದ್ದುಗೆ ಡಾ.ಅಂಬೇಡ್ಕರ್ ಪ್ರಶಸ್ತಿ..!

ಸಿದ್ದುಗೆ ಡಾ.ಅಂಬೇಡ್ಕರ್ ಪ್ರಶಸ್ತಿ..!

ಮಾಜಿ ಸಿಎಂ ಸಿದ್ದರಾಮಯ್ಯಗೆ ಪ್ರತಿಷ್ಠಿತ ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ಪ್ರತಿ ವರ್ಷ ನೀಡುವ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗೆ ಈ ಬಾರಿ ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಧನ್ಯವಾದಗಳು.

ಪಕ್ಷದ ಸಂಸದರಾದ ತಿರುಮಾವಲವನ್ ಅವರು ಇಂದು ನನ್ನನ್ನು ಭೇಟಿ ನೀಡಿ ಪ್ರಶಸ್ತಿ ಸ್ವೀಕರಿಸಲು ಜುಲೈ 30ರಂದು ಚೆನ್ನೈಗೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

 

Related