ಡಾ. ಸುಧಾಕರ್ ಸದ್ಯದಲ್ಲೇ ಜೈಲಿಗೆ ಹೋಗ್ತಾರೆ; ಸಿಎಂ

ಡಾ. ಸುಧಾಕರ್ ಸದ್ಯದಲ್ಲೇ ಜೈಲಿಗೆ ಹೋಗ್ತಾರೆ; ಸಿಎಂ

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಸುಧಾಕರ್ ಅವರು ಕೋವಿಡ್ ಸಂದರ್ಭದಲ್ಲಿ ಬಹಳಷ್ಟು ಭ್ರಷ್ಟಾಚಾರ ವ್ಯಸಗಿದ್ದಾರೆ ಆದ್ದರಿಂದ ಸದ್ಯದಲ್ಲೇ ಸುಧಾಕರ್ ಅವರು ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಅವರು, ಸುಧಾಕರ್ ಆರೋಗ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಭ್ರಷ್ಟರು ಸಂಸತ್​ಗೆ ಹೋದರೆ ಭ್ರಷ್ಟಾಚಾರ ಮತ್ತಷ್ಟು ಹೆಚ್ಚಾಗುತ್ತದೆ. ಅವರ ಕುರಿತ ಹಗರಣದ ತನಿಖೆಗೆ ಈಗಾಗಲೇ ಆಯೋಗ ರಚಿಸಿದ್ದೇವೆ. ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಅವರ ವಿರುದ್ಧವೇ ಇದೆ. ಹಾಗಾಗಿ ಸುಧಾಕರ್​ ನೂರಕ್ಕೆ ನೂರಷ್ಟು ಜೈಲಿಗೆ ಹೋಗುತ್ತಾರೆ ಎಂದು ಕಿಡಿಕಾರಿದರು.

ಬಿಜೆಪಿಯಲ್ಲಿ ಮಂತ್ರಿಯಾಗಿ ಹಣ ಲೂಟಿ ಹೊಡೆದಿದ್ದಾನೆ ಎಂದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದೀರಿ. ರಾಜಕೀಯ ಲಾಭಿ ನಡೆಸಿ ಈ ಭಾರಿ ಎನ್.ಡಿ.ಎ ಟಿಕೆಟ್ ಪಡೆದಿದ್ದಾನೆ ಎಂದು ವಾಗ್ದಾಳಿ ನಡೆಸಿದರು.

 

Related