ವಿಚ್ಛೇದನಕ್ಕೆ ಕೋರ್ಟ್ ಮೆಟ್ಟಿಲೇರಿದ ಡಾ. ರಾಜ್ ಕುಟುಂಬದ ಕುಡಿ

ವಿಚ್ಛೇದನಕ್ಕೆ ಕೋರ್ಟ್ ಮೆಟ್ಟಿಲೇರಿದ ಡಾ. ರಾಜ್ ಕುಟುಂಬದ ಕುಡಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗಷ್ಟೇ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಕೆ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಮತ್ತೆ ಇದೀಗ ಸ್ಯಾಂಡಲ್ ವುಡ್ ನ ಡಾ ರಾಜ್ ಕುಟುಂಬದ ಕುಡಿ ವಿಚ್ಛೇದನಕೆ ಮುಂದಾಗಿದ್ದಾರೆ.

ಹೌದು, ಡಾ. ರಾಜಕುಮಾರ್ ಅವರ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.  ಯುವ ಪತ್ನಿ ಶ್ರೀದೇವಿ ಅವರಿಂದ ಕಳೆದ ಹಲವಾರು ದಿನಗಳಿಂದ ಮನಸ್ತಾಪ ಉಂಟಾಗುತ್ತಿರುವುದರಿಂದ ತಮ್ಮ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೀಗ ತಿಳಿದು ಬಂದಿದೆ. ಇದನ್ನೂ ಓದಿ: ಮಾರುಕಟ್ಟೆಯಲ್ಲಿ ಟೊಮೇಟೊಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

​ಯುವ ಮತ್ತು ಶ್ರೀದೇವಿ ಇವರಿಬ್ಬ ನಡುವೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಬೇರೆ ಆಗುತ್ತಾರೆ. ಯುವ ಹಾಗೂ ಶ್ರೀದೇವಿ  ಕಳೆದ 4 ವರ್ಷಗಳ ಹಿಂದೆ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗಿ ಆಗಿದ್ದರು. ಇವರದ್ದು ಲವ್​ ಮ್ಯಾರೇಜ್.

ಮದುವೆ ಬಳಿಕ ರಾಜ್​ಕುಮಾರ್ ಅಕಾಡೆಮಿಯನ್ನು ಶ್ರೀದೇವಿ ನಡೆಸಿಕೊಂಡು ಹೋಗುತ್ತಿದ್ದರು. ಈಗ ಇವರ ಮಧ್ಯೆ ಮನಸ್ತಾಪ ಉಂಟಾಗಿದ್ದು ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.

 

Related