ಭರ್ಜರಿ ಗೆಲುವು ಸಾಧಿಸಿದ ಡಾ. ಮಂಜುನಾಥ್..!

ಭರ್ಜರಿ ಗೆಲುವು ಸಾಧಿಸಿದ ಡಾ. ಮಂಜುನಾಥ್..!

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಸಾಲಿನಲ್ಲಿ ಬಾರಿ ಕುತೂಹಲ ಕೆರಳಿಸಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರ ಕ್ಷೇತ್ರ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು. ಆದರೆ ಈಗ ಕಾಂಗ್ರೆಸ್ ಧೂಳಿಪಟ ಮಾಡಿ ಬಿಜೆಪಿಯು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಲಗ್ಗೆ ಇಟ್ಟಿದೆ.

ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿಕೆ ಸುರೇಶ್ ಅವರು ಹೀನಾಯವಾಗಿ ಸೋಲನ್ ಅನುಭವಿಸಿದ್ದಾರೆ. ಇನ್ನು ಮೈತ್ರಿ ಪಕ್ಷದ ಅಭ್ಯರ್ಥಿ ಡಾ. ಮಂಜುನಾಥ್ ಅವರು ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಇದನ್ನೂ ಓದಿ: ಹಾವೇರಿ-ಗದಗ ಕ್ಷೇತ್ರದಲ್ಲಿ ಬೊಮ್ಮಾಯಿ ಗೆಲುವು..!

ಡಿಕೆ ಸುರೇಶ್‌ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 67 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮೊದಲ ಸುತ್ತಿನ ಮತ ಏಣಿಕೆಯಲ್ಲಿ ಡಾ. ಸಿಎನ್ ಮಂಜುನಾಥ್, ಡಿಕೆ ಸುರೇಶ್‌ ವಿರುದ್ಧ 67,017 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಅವರು 2,19,880 ಮತಗಳನ್ನು ಪಡೆದಿದ್ದರೆ, ಡಿಕೆ.ಸುರೇಶ್ ಅವರು 1,52,863 ಮತಗಳನ್ನು ಪಡೆದಿದ್ದಾರೆ.

 

Related