ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ 2020 ಯನ್ನು ರಾಜ್ಯದಲ್ಲಿ ಸೋಮವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ನವದೆಹಲಿಯಿಂದ ವರ್ಚುವಲ್ ಮೂಲಕ ಚಾಲನೆ ನೀಡಿದರು. ದೇಶದಲ್ಲಿ ಮೊಟ್ಟ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕಕ್ಕೆ ಸಿಕ್ಕಿದೆ. ಮುಖ್ಯಮಂತ್ರಿ ಬೊಮ್ಮಾಯಿ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯವಾಣಿಯನ್ನು ಉದ್ಘಾಟನೆ ಮಾಡಿದರು. ಸಮಗ್ರ ವಿಶ್ವವಿದ್ಯಾಲಯ, ಕಾಲೇಜು ನಿರ್ವಹಣಾ ವ್ಯವಸ್ಥೆಯ ಪ್ರವೇಶ ಮಾದರಿ ವ್ಯವಸ್ಥೆಗೆ ಚಾಲನೆ ನೀಡಿದರು. ಶಿಕ್ಷಣ ತಜ್ಞ ಡಾ.ಕೆ. ಕಸ್ತೂರಿ ರಂಗನ್, ಡಾ. ಎಂ ಕೆ ಶ್ರೀಧರ್, ಡಾ. ಟಿ ವಿ ಕಟ್ಟಿಮನಿ, ಡಾ. ಅನುರಾಗ ಬೇಹಾರ್, ಉನ್ನತ ಶಿಕ್ಷಣ ಖಾತೆ ಸಚಿವರಾದ ಡಾ.ಸಿಬೆನ್ ಅಶ್ವಥ್ ನಾರಾಯಣ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಉಪಸ್ಥಿತರಿದ್ದರು.

Related