ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಮೃತ ಹಸ್ತದಿಂದ ಇಂದು ಮಡಿವಾಳ ಸಿದ್ದಾರ್ಥ್ ನಗರದಲ್ಲಿರುವಂತಹ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರಿನಲ್ಲಿ ಹೆಬ್ಬಾಗಿಲು ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಗಿತ್ತು.
ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಪ್ರಗತಿ ರಥ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಗೋಪಿನಾಥ್ ರೆಡ್ಡಿ, ಮತ್ತು ಬಿಟಿಎಂ ವಿಧಾನಸಭಾ ಕ್ಷೇತ್ರ ಬಿಜೆಪಿಯ ಟಿಕೆಟ್ ಆಕಾಂಕ್ಷಿ ಯಾದ ಶ್ರೀಧರ್ ರೆಡ್ಡಿ, ರಾಜ್ಯ ಅಲ್ಪಸಂಖ್ಯಾತರ ಮೋರ್ಚ ಅಧ್ಯಕ್ಷ ಸೈಯದ್ ಸಲಾಂ, ಬಿಜೆಪಿ ಮುಖಂಡರಾದ ಮುತ್ತಪ್ಪ, ವಾರ್ಡ್ ಅಧ್ಯಕ್ಷರಾದ ವೆಂಕಟಸ್ವಾಮಿ ರೆಡ್ಡಿ ಮತ್ತು ದಲಿತ ಸಂಘರ್ಷದ ಸಮಿತಿಯ ಪದಾಧಿಕಾರಿಗಳು ಮತ್ತು ಬಿಜೆಪಿಯ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.