ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ : ಪೋಸ್ಟರ್ ಬಿಡುಗಡೆ

ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ : ಪೋಸ್ಟರ್ ಬಿಡುಗಡೆ

ಬೆಂಗಳೂರು: ಇಡೀ ದೇಶದಲ್ಲಿ ನರೇಂದ್ರ ಮೋದಿಯವರ ಆಡಳಿತ ವೈಖರಿಯನ್ನು ಒಪ್ಪಿಕೊಂಡು ಸಾವಿರಾರು ಜನ ಇಂದು ಭಾರತೀಯ ಜನತಾ ಪಾರ್ಟಿಯನ್ನು ಸೇರಿಕೊಳ್ಳುತ್ತಿದ್ದಾರೆ. ಇದರ ಅರ್ಥ ಜನತಾ ಪಾರ್ಟಿಗೆ ಬಂದವರೆಲ್ಲ ಒಳ್ಳೆಯವರಲ್ಲ, ಕೆಟ್ಟವರೂ ಅಲ್ಲ. ಆದರೆ ಎಲ್ಲೋ ಒಂದು ಕಡೆ ಭಾವನಾತ್ಮಕ ಸಂಬಂಧವನ್ನು ಹೊಂದಿ ನಮ್ಮ ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದಾರೆ ಎಂದು  ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಇಂದು (ಶುಕ್ರವಾರ) ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ, ರಾಜ್ಯ  ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತಿಚೀಗೆ ಕಾಂಗ್ರೆಸ್ ಕಡೆ ಮುಖಮಾಡಿ ಹೋಗುತ್ತಿರುವವರು ಇಷ್ಟೆಲ್ಲ ಭ್ರಷ್ಟಾಚಾರವನ್ನು ಕಂಡರು ಸಹ ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದನ್ನು ಕಂಡರೆ ಇವರಿಗೂ ಸಹ ಕಮಿಷನ್ ವಾಸನೆ ಸ್ವಲ್ಪ ಹಿತಕರವಾಗಿದೆ ವಿ ಡಿ. ಸದಾನಂದಗೌಡ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದ ಮಾಜಿ ಹಾಗೂ ಮಾಜಿ ಕೇಂದ್ರ ಮುಖ್ಯಮಂತ್ರಿಗಳು ಸಚಿವರಾದ ಶ್ರೀ ಡಿ.ವಿ. ಸದಾನಂದಗೌಡ, ರಾಜ್ಯದ ಮಾಜಿ ಸಚಿವರಾದ ಶ್ರೀ ಕೆ ಗೋಪಾಲಯ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್ ರವಿಕುಮಾರ್, ಶಾಸಕರಾದ ಶ್ರೀ ರವಿ ಸುಬ್ರಮಣ್ಯ, ರೈತ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ವಿಧಾನಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

 

Related