ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ: ಸಿಎಂ

ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ: ಸಿಎಂ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ನಿನ್ನೆ ಮಂಗಳವಾರ ಕೊನೆಯ ಉಸಿರೆಳೆದಿದ್ದಾರೆ. ಇಂದು ಅವರ ಅಂತಿಮ ಸಂಸ್ಕಾರ ನೆರವೇರರಲ್ಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರಕ್ಕೆ ತೆರಳಿ ದ್ವಾರಕೀಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ಅವರು, ಪ್ರಚಂಡ ಹಾಸ್ಯನಟನೊಂದಿಗಿದ್ದ ತಮ್ಮ ಒಡನಾಟವನ್ನು ಮೆಲಕು ಹಾಕಿದರು. ಎಲ್ಲಕ್ಕಿಂತ ಮುಖ್ಯವಾಗಿ ದ್ವಾರಕೀಶ್ ತಮ್ಮೂರು ಮೈಸೂರಿನವರು ಎಂದು ಮುಖ್ಯಮಂತ್ರಿ ಅಭಿಮಾನದಿಂದ ಹೇಳಿದರು.

ಒಬ್ಬ ನಟನಾಗಿ, ನಿರ್ಮಾಪಕ ಮತ್ತು ನಿರ್ದೇಶಕನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಬಹು ದೊಡ್ಡ ಕಾಣಿಕೆ ಸಲ್ಲಿಸಿದ್ದಾರೆ. ದ್ವಾರಕೀಶ್ ಅವರು ಡಾ ರಾಜ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೊಂದಿಗೆ ನಟಿಸಿದ ಚಿತ್ರಗಳನ್ನು ನೋಡಿದ್ದೇನೆ, ಸಿನಿಮಾಗಳನ್ನು ಮಾಡುವಾಗ ಅವರು ಹಲವಾರು ಏಳುಬೀಳುಗಳನ್ನು ಕಂಡಿದ್ದು ನಿಜ, ಸೋತಾಗ ಎದೆಗುಂದದೆ ಮುಂದೆ ಸಾಗಿದ ಅವರ ಆತ್ಮಸ್ಥೈರ್ಯ ಅಭಿನಂದನೀಯ ಎಂದು ಸಿದ್ದರಾಮಯ್ಯ ಹೇಳಿದರು.

Related